ದಿನಾಂಕ 14.09.2022 ರಂದು ಸಹೋದಯ ಬೆಥನಿ ಸೇವಾ ಕೇಂದ್ರದ ವತಿಯಿಂದ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕೆಂಜಾರು ಇಲ್ಲಿನ ಒಂದನೇ ತರಗತಿಯಿಂದ ಏಳನೇ ತರಗತಿ ವರೆಗಿನ ಹೆಣ್ಣು ಮಕ್ಕಳಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸಹೋದಯ ಸಂಸ್ಥೆಯ ಸಂಯೋಜಕರಾದ ಭ| ಲೀನಾ ಡಿ ಕೋಸ್ಟ, ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಜೋಯ್ ಡಿ ಸೋಜಾ, ಸಂತ ಸೆಬಾಸ್ಟಿಯನ್ ಚರ್ಚ್ ಮಹಿಳಾ ಆಯೋಗದ ಸದಸ್ಯರಾದ ಶ್ರೀಮತಿ ಜೆನಿಫರ್ ಡಿ ಸೋಜಾ , ಸಹೋದಯ ಸಂಸ್ಥೆಯ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ , ಕು| ರಂಜಿನಿ, ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಮೊದಲಾದವರು ಉಪಸ್ಥಿತರಿದ್ದರು. ಮಕ್ಕಳ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ತದನಂತರ ಭ| ಲೀನಾ ಇವರು ಹೆಣ್ಣು ಮಕ್ಕಳ ದಿನದ ಮಹತ್ವವನ್ನು ತಿಳಿಸುತ್ತಾ ಸಪ್ಟೆಂಬರ್ 08 ಮಾತೆ ಮರಿಯಮ್ಮ ಇವರ ಹುಟ್ಟು ಹಬ್ಬದ ದಿನವನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸುತ್ತಿದ್ದೇವೆ ಅದೇ ರೀತಿ ಇತ್ತೀಚಿಗಿನ ದಿನಗಳಲ್ಲಿ ಹೆಣ್ಣು ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರಲ್ಲದೆ ಮಕ್ಕಳ ಕಳ್ಳ ಸಾಗಾಣಿಕೆಯು ಹೆಚ್ಚಾಗಿ ನಡೆಯುತ್ತಿದ್ದು ಇದನ್ನು ಹೇಗೆ ತಡೆಯಬಹುದೆಂಬುದು ಹಾಗೂ ಸಾಗಾಟದಾರರ ಸುಳ್ಳು ಆಮಿಷಕ್ಕೆ ಸಿಲುಕದೆ ಉತ್ತಮ ರೀತಿಯಲ್ಲಿ ನಮ್ಮ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕು, ಜಾಗೃತರಾಗಬೇಕು. ಈ ರೀತಿಯ ತೊಂದರೆಯಾದಲ್ಲಿ ತಮ್ಮ ಶಾಲಾ ಶಿಕ್ಷಕರಲ್ಲಿ ತಿಳಿಸುವಂತೆ ಕಿವಿಮಾತನಾಡುತ್ತಾ ಈ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ಮಕ್ಕಳಿಗೆ ಬಲೂನ್ ಗಳನ್ನು ನೀಡಿ ಅದರಲ್ಲಿ ತಮ್ಮ ತಮ್ಮ ಹೆಸರುಗಳನ್ನು ಬರೆದು ಹೆಣ್ಣು ಮಕ್ಕಳ ಮಹತ್ವವನ್ನು ಮೌಲ್ಯಾಧಾರಿತ, ನೀತಿ ಭೋಧನೆಯೊಂದಿಗೆ ಗುಂಪು ಆಟವನ್ನು ಆಡಿಸಲಾಯಿತು. ತದನಂತರ 5ನೇ ತರಗತಿ ಯಿಂದ 7ನೇ ತರಗತಿ ವರೆಗಿನ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಮಕ್ಕಳ ಕಳ್ಳ ಸಾಗಾಣಿಕೆ ಕುರಿತಾದ ಕಿರು ಚಿತ್ರಣದ ಮೂಲಕ ಮಾಹಿತಿಯನ್ನು ನೀಡಿದರು. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು. ಸ್ವಾಗತ ಶ್ರೀಮತಿ ಭಾಗ್ಯ (ಶಿಕ್ಷಕಿ) ಶ್ರೀಮತಿ ರೋಸೇಲಿನ್ ಇವರ ಧನ್ಯವಾದದೊಂದಿಗೆ ಸಿಹಿ ತಿಂಡಿಯನ್ನು ಹಂಚಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

 

 

 

 

 

 

 

 

 

 

 

 

 

 

 

Comments powered by CComment

Contact Us

Bethany Social  Service Trust ®
Sahodaya Bethany Seva Kendra
Bendur
Mangalore-575002

Phone: 0824-2214156

E-Mail:[email protected]

Copyright ©2020 www.bsstmangalore.org.

Powered by